Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಕ್ರಿಕೆಟ್
  • ಕೊನೆ ಕ್ಷಣದ ಬದಲಾವಣೆ… ಟೀಮ್ ಇಂಡಿಯಾಗೆ ಸಿರಾಜ್ ಎಂಟ್ರಿ
  • ಕ್ರಿಕೆಟ್

ಕೊನೆ ಕ್ಷಣದ ಬದಲಾವಣೆ… ಟೀಮ್ ಇಂಡಿಯಾಗೆ ಸಿರಾಜ್ ಎಂಟ್ರಿ

Jiokannadanews Posted on 7 months ago 1 minute read
Mohammed Siraj to replace injured Harshit Rana in T20 World Cup 2026 Squad

Mohammed Siraj

ಟಿ20 ವಿಶ್ವಕಪ್​ (T20 World Cup 2026) ಆರಂಭಕ್ಕೂ ಮುನ್ನ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ತಂಡದಲ್ಲಿದ್ದ ಪ್ರಮುಖ ವೇಗಿ ಹರ್ಷಿತ್ ರಾಣಾ (Harshit Rana) ಗಾಯಗೊಂಡು ಹೊರಬಿದ್ದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹರ್ಷಿತ್ ಅವರ ಕೈಗೆ ಗಾಯವಾಗಿತ್ತು. ಹೀಗಾಗಿ ಅವರು ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇತ್ತ ಹರ್ಷಿತ್ ರಾಣಾ ಬದಲಿಗೆ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ (Mohammed Siraj) ಎಂಟ್ರಿ ಕೊಟ್ಟಿದ್ದಾರೆ.

ಈ ಬಾರಿಯ ವಿಶ್ವಕಪ್ ತಂಡದಲ್ಲಿ ಮೊಹಮ್ಮದ್ ಸಿರಾಜ್​ಗೆ ಸ್ಥಾನ ಲಭಿಸಿರಲಿಲ್ಲ. ತಂಡದ ಪ್ರಮುಖ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಆಯ್ಕೆಯಾಗಿದ್ದರು. ಆದರೆ ದುರಾದೃಷ್ಟ ಹರ್ಷಿತ್ ಅವರು ಗಾಯಗೊಂಡು ವಿಶ್ವಕಪ್​ ಟೂರ್ನಿಯಿಂದ ಹೊರಗುಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಅವರಿಗೆ ಬುಲಾವ್ ನೀಡಲಾಗಿದ್ದು, ಅದರಂತೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸಿರಾಜ್ ಮುಂಬೈನಲ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ಸಿರಾಜ್​ಗೆ ಸಿಗಲಿದೆಯಾ ಅವಕಾಶ?

ಭಾರತ ಟಿ20 ವಿಶ್ವಕಪ್ ತಂಡದಲ್ಲಿರುವುದು ಕೇವಲ ಮೂವರು ವೇಗಿಗಳು ಮಾತ್ರ. ಇಲ್ಲಿ ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಮುಖ್ಯ ಬೌಲರ್​ಗಳಾಗಿ ಕಣಕ್ಕಿಳಿಯುವುದು ಖಚಿತ. ಇದಾಗ್ಯೂ ಮೂರನೇ ವೇಗಿಯನ್ನು ಕಣಕ್ಕಿಳಿಸಲು ಬಯಸಿದರೆ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಗಲಿದೆ.

ಅದರಲ್ಲೂ ಬುಮ್ರಾಗೆ ಹೆಚ್ಚಿನ ವಿಶ್ರಾಂತಿ ನೀಡಲು ಮುಂದಾದರೆ ಮೊಹಮ್ಮದ್ ಸಿರಾಜ್​ಗೆ ಅವಕಾಶ ದೊರೆಯಲಿದೆ. ಏಕೆಂದರೆ ಅತ್ತ ಹೆಚ್ಚುವರಿ ವೇಗಿಯಾಗಿ ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿದ್ದು, ಪಾಂಡ್ಯ ಜೊತೆಗೆ ಶಿವಂ ದುಬೆ ಕೂಡ ಕೆಲ ಓವರ್​ಗಳನ್ನು ಎಸೆಯಬಲ್ಲರು.

ಹೀಗಾಗಿ ದುರ್ಬಲ ತಂಡಗಳ ವಿರುದ್ಧದ ಪಂದ್ಯಗಳ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದರೆ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.

ಟೀಮ್ ಇಂಡಿಯಾದ ಮೊದಲ ಪಂದ್ಯ ಯಾವಾಗ?

ಭಾರತ ತಂಡವು ಶನಿವಾರ (ಫೆ.7) ಅಮೆರಿಕ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಫೆಬ್ರವರಿ 12 ರಂದು ನಮೀಬಿಯಾ ಹಾಗೂ ಫೆಬ್ರವರಿ 15 ರಂದು ಪಾಕಿಸ್ತಾನ್ ತಂಡವನ್ನು ಎದುರಿಸಬೇಕಿದೆ. ಹಾಗೆಯೇ ಮೊದಲ ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ  ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಇದನ್ನೂ ಓದಿ: ಸಹಕಾರಿ ಬ್ಯಾಂಕ್​ನಲ್ಲಿ ಡೈವರ್​ಗಳಿಗೆ ಉದ್ಯೋಗಾವಕಾಶ

ಭಾರತ ಟಿ20 ವಿಶ್ವಕಪ್ ತಂಡ:

ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, , ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.

 

About the Author

Jiokannadanews

Administrator

jiokannadanews.com

Visit Website View All Posts
Tags: Mohammed Siraj T20 World Cup Team India

Post navigation

Previous: ದಾಖಲೆಗಳ ಮೇಲೆ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ
Next: ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’

Related Stories

India’s squad for Afghanistan T20I series
  • ಕ್ರಿಕೆಟ್

ಭಾರತ ಟಿ20 ತಂಡ ಪ್ರಕಟ

Jiokannadanews Posted on 1 week ago
Did You Know About These 11 Types Of No Balls In Cricket?
  • ಕ್ರಿಕೆಟ್

ಕ್ರಿಕೆಟ್​​ನಲ್ಲಿರುವ 11 ನೋಬಾಲ್​ ಬಗ್ಗೆ ಗೊತ್ತಿದ್ಯಾ?

Jiokannadanews Posted on 2 weeks ago
Aryavir Sehwag - Anvay Dravid
  • ಕ್ರಿಕೆಟ್

ಟೀಮ್ ಇಂಡಿಯಾಗೆ ಸೆಹ್ವಾಗ್, ದ್ರಾವಿಡ್ ಪುತ್ರರ ಎಂಟ್ರಿ

Jiokannadanews Posted on 2 weeks ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 2 days ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 6 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 1 week ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 6 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.