Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’
  • ಕ್ರೈಮ್
  • ರಾಜ್ಯ

ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’

Jiokannadanews Posted on 4 months ago
Karnataka Police

ಕರ್ನಾಟಕದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆಯಾ? ಈ ಒಂದು ವರದಿಯನ್ನು ಮುಂದಿಟ್ಟರೆ ಖಂಡಿತ ಹೌದು ಎಂದೆನಿಸುತ್ತದೆ. ಏಕೆಂದರೆ ಇಲ್ಲಿ ಕಳ್ಳರದ್ದೇ ಮೇಲುಗೈ. ಅಂದರೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ದಾಖಲಾಗಿರುವ ವಾಹನ ಕಳವು, ಮನೆಗಳ್ಳತನ ಮತ್ತು ದರೋಡೆ, ಸುಲಿಗೆಗಳ ಪ್ರಕರಣಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಕಳ್ಳರ ಹಾವಳಿ ಹೆಚ್ಚಾಗಿರುವುದು ಸ್ಪಷ್ಟವಾಗುತ್ತದೆ. ಹೀಗೆ ಕಳ್ಳರ ಹಾವಳಿ ಹೆಚ್ಚಾಗಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಕಳ್ಳರನ್ನು ಹಿಡಿಯುವಲ್ಲಿ ಪೊಲೀಸರು ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

ರಾಜ್ಯದ ಬಹುತೇಕ ಠಾಣೆಯಲ್ಲೂ ಪ್ರತಿ ದಿನ ಒಂದಲ್ಲ ಒಂದು ಕಳ್ಳತನ ಪ್ರಕರಣಗಳು ದಾಖಲಾಗುತ್ತಿವೆ. ಇವುಗಳಲ್ಲಿ ಸಾಮಾನ್ಯ ಕಳ್ಳತನದ ಪ್ರಕರಣಗಳಿವೆ, ವಾಹನ ಕಳ್ಳತಗಳ ದೂರುಗಳಿವೆ. ಇನ್ನು ದರೋಡೆ, ಸುಲಿಗೆ ಪ್ರಕರಣಗಳು ಕಂಡು ಬರುತ್ತವೆ. ಆದರೆ ಇವುಗಳನ್ನು ಬೇಧಿಸುವಲ್ಲಿ ಕರ್ನಾಟಕ ಪೊಲೀಸರು ವಿಫಲರಾಗುತ್ತಿರುವುದೇ ಅಚ್ಚರಿ.

ಏಕೆಂದರೆ 2025 ರಲ್ಲಿ ಒಟ್ಟು 30,876 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಕಳೆದ ವರ್ಷ ಭೇದಿಸಿರುವುದು ಕೇವಲ 7236 ಕೇಸ್​​ಗಳು ಮಾತ್ರ ಎಂದರೆ ನಂಬಲೇಬೇಕು. ಅಂದರೆ 23 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.

ಒಂದು ವರ್ಷದಲ್ಲಿ 23 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದರೆ ಸಮಾಜದ ಗತಿಯೇನು ಎಂಬ ಪ್ರಶ್ನೆ ಮೂಡುವುದು ಸಹಜ. ಹೀಗಾಗಿಯೇ ಇದೀಗ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳೆದ್ದಿವೆ.

ಬೆಂಗಳೂರಿನಲ್ಲೇ ಕಳ್ಳರ ಗ್ಯಾಂಗ್:

ಕರ್ನಾಟಕದಲ್ಲಿ ದಾಖಲಾಗುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಬಹುತೇಕ ಬೆಂಗಳೂರಿನಲ್ಲಿಯವು ಎಂಬುದು ವಿಶೇಷ. ಅಂದರೆ ಬೆಂಗಳೂರಿನಲ್ಲೇ ಹೆಚ್ಚು ಕಳ್ಳರು ಬೀಡು ಬಿಟ್ಟಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಕೇಸ್​​​ಗಳು.

2023 ರಲ್ಲಿ ಬೆಂಗಳೂರಿನ ದಾಖಲಾಗಿದ್ದ ಪ್ರಕರಣಗಳ ಸಂಖ್ಯೆ 45990. ಇದರಲ್ಲಿ ಪೊಲೀಸರು 17057 ಕೇಸ್​​​ಗಳನ್ನು ಭೇದಿಸಿದ್ದಾರೆ.
2024 ರಲ್ಲಿ ಬೆಂಗಳೂರಿನಲ್ಲಿ 40628 ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ 15815 ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ 2023 ರಲ್ಲಿ ಮತ್ತು 2024 ರಲ್ಲಿ 27,587 ಮತ್ತು 23,057 ಪ್ರಕರಣಗಳ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂಬುದು. ಅಂದರೆ 2 ವರ್ಷಗಳಲ್ಲಿ 50 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲೇ ಬಾಕಿ ಉಳಿದಿದ್ದವು.

ಇದೀಗ 2025 ರ ಒಟ್ಟು 30,876 ಕಳ್ಳತನ ಪ್ರಕರಣಗಳಲ್ಲಿ 23 ಸಾವಿರಕ್ಕೂ ಅಧಿಕ ಪ್ರಕರಣಗಳು ಬಾಕಿ ಉಳಿದಿವೆ. ಅಂದರೆ ಇಲ್ಲಿ ಪೊಲೀಸರಿಗಿಂತ ಕಳ್ಳರೇ ಚಾಣಾಕ್ಷತೆ ಮೆರೆಯುತ್ತಿರುವುದು ಸುಳ್ಳಲ್ಲ.

ಈ ಚಾಣಾಕ್ಷತೆಯನ್ನು ಮೀರಿ ಕರ್ನಾಟಕ ಪೊಲೀಸರು ಆದಷ್ಟು ಬೇಗ ಎಲ್ಲಾ ರೀತಿ ಕಳ್ಳರಿಗೆ ಕಡಿವಾಣ ಹಾಕಲಿ ಎಂದು ಆಶಿಸೋಣ.

About the Author

Jiokannadanews

Administrator

jiokannadanews.com

Visit Website View All Posts
Tags: Crime News

Post navigation

Previous: ಕೊನೆ ಕ್ಷಣದ ಬದಲಾವಣೆ… ಟೀಮ್ ಇಂಡಿಯಾಗೆ ಸಿರಾಜ್ ಎಂಟ್ರಿ
Next: 2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!

Related Stories

DK Shivakumar Takes Charge: 13 MLAs to Swear In as Ministers
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 6 hours ago
1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago

Trending News

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ! DK Shivakumar Takes Charge: 13 MLAs to Swear In as Ministers 1
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Posted on 6 hours ago
ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು! 1777475804134 2
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Posted on 1 month ago
IPL 2026: ‘ಸೂರ್ಯವಂಶಿ’ ಎಂಬ ಸುನಾಮಿ vaibhav-sooryavanshi-3 3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Posted on 1 month ago
ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ! Porsche Mystery Behind ED Raids on Nalapad! 4
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Posted on 1 month ago
ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್ Vishu Poster Row: Restaurant Owner Jailed for Offensive Ad 5
  • ರಾಜ್ಯ

ಕೃಷ್ಣನ ಮುಂದೆ ಚಿಕನ್ ಮಂದಿ: ಹೋಟೆಲ್ ಮಾಲೀಕ ಅರೆಸ್ಟ್

Posted on 2 months ago

You may have missed

DK Shivakumar Takes Charge: 13 MLAs to Swear In as Ministers
  • ರಾಜ್ಯ

ಸಿಎಂ ಡಿಕೆಶಿ ಜೊತೆ 13 ಶಾಸಕರಿಗೆ ಸಚಿವ ಸ್ಥಾನ!

Jiokannadanews Posted on 6 hours ago
1777475804134
  • ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಭಾರೀ ಮಳೆಗೆ ಕಾಂಪೌಂಡ್ ಕುಸಿದು 7 ಮಂದಿ ಸಾವು!

Jiokannadanews Posted on 1 month ago
vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 1 month ago
Porsche Mystery Behind ED Raids on Nalapad!
  • ರಾಜ್ಯ

ನಲಪಾಡ್ ಇಡಿ ದಾಳಿ ಹಿಂದಿದೆ ಪೋರ್ಷೆ ಕಾರಿನ ರಹಸ್ಯ!

Jiokannadanews Posted on 1 month ago

Categories

  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.