Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • 2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!
  • ರಾಜ್ಯ

2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!

Jiokannadanews Posted on 7 months ago 1 minute read
Nikhil Kumaraswamy

ಜಾತ್ಯತೀತ ಜನತಾ ದಳದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ಮುಂದಿನ ಕ್ಷೇತ್ರ ಯಾವುದು? ಈ ಪ್ರಶ್ನೆಗೆ ಕಳೆದ ತಿಂಗಳವರೆಗೆ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಎಂಬ ಉತ್ತರ ಬರುತ್ತಿತ್ತು. ಆದರೆ ಯುವ ದಳಪತಿ ಸೋತಲ್ಲಿಂದಲೇ ಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಅಂದರೆ ನಿಖಿಲ್ ಕುಮಾರಸ್ವಾಮಿ ಎಲ್ಲಿ ಸೋತರೋ ಅಲ್ಲಿಂದಲೇ ರಾಜಕೀಯ ಜೀವನ ಕಟ್ಟಿಕೊಳ್ಳಲು ಯೋಜನೆ ರೂಪಿಸುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮುಕಿದ್ದು 2019 ರಲ್ಲಿ. ಮೊದಲಿಗೆ ಲೋಕಸಭೆಗೆ ಸ್ಪರ್ಧಿಸಿದ್ದ ನಿಖಿಲ್ ಆ ಬಳಿಕ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದರು. ಆದರೆ ಮೂರು ಬಾರಿ ಕೂಡ ಅವರಿಗೆ ಅದೃಷ್ಟ ಕೈ ಕೊಟ್ಟಿತ್ತು.

  • 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಅವರು ಸುಮಲತಾ ಅಂಬರೀಷ್ ವಿರುದ್ಧ ಸೋಲನುಭವಿಸಿದ್ದರು.
  • 2023 ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ್ದ ನಿಖಿಲ್, ಕಾಂಗ್ರೆಸ್​​ನ ಇಕ್ಬಾಲ್ ಅನ್ಸಾರಿ ವಿರುದ್ಧ ಪರಾಜಯಗೊಂಡಿದ್ದರು.
  • 2024 ರಲ್ಲಿ ನಡೆದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​​ನ ಸಿಪಿ ಯೋಗೇಶ್ವರ್ ವಿರುದ್ಧ ಸ್ಪರ್ಧಿಸಿ ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿ ಸೋಲುಂಡಿದ್ದರು.

ಮುಂದಿನ ಕ್ಷೇತ್ರ ಯಾವುದು?

ಜನರ ತೀರ್ಪಿನಲ್ಲಿ ಮೂರು ಬಾರಿ ಸೋತಿರುವ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯುವುದು ಖಚಿತವಾಗಿದೆ. ಅದು ಸಹ 2028ರ ವಿಧಾನಸಭಾ ಚುನಾವಣೆಯಲ್ಲಿ. ಇದಕ್ಕಾಗಿ ಅವರು ಈಗಾಗಲೇ ರಾಮನಗರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಜಾತ್ಯತೀತ ಜನತಾದಳ ಪಕ್ಷವನ್ನು ನಂಬಿರುವ ಕಾರ್ಯಕರ್ತರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಅದರಲ್ಲೂ ನನ್ನ ತಾತ ದೇವೇಗೌಡರಿಗೆ ರಾಜಕೀಯ ಮರುಜನ್ಮ ನೀಡಿದ ಮಣ್ಣನ್ನು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರ ಕರ್ಮಭೂಮಿಯನ್ನು ನಾನು ಎಂದಿಗೂ ಬಿಟ್ಟು ಹೋಗುವುದಿಲ್ಲ.

ಅದರಂತೆ ಮುಂದಿನ ಚುನಾವಣೆಯಲ್ಲಿ ನಾನು ರಾಮನಗರದಲ್ಲೇ ಸ್ಪರ್ಧಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ರಾಮನಗರದಿಂದಲೇ ನಾಲ್ಕನೇ ಬಾರಿ ಅದೃಷ್ಟ ಪರೀಕ್ಷೆ ಮಾಡಲಿದ್ದೇನೆ ಎಂಬುದನ್ನು ಯುವ ದಳಪತಿ ಘೋಷಿಸಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಗೆ ರಾಮನಗರ ನಿಖಿಲ್ ಕುಮಾರಸ್ವಾಮಿಗೆ ಫಿಕ್ಸ್ ಎಂದೇ ಹೇಳಬಹುದು.

ನಿಖಿಲ್ ಕುಮಾರಸ್ವಾಮಿ ಅವರ ಸೋಲುಗಳ ಸಂಕ್ಷಿಪ್ತ ಮಾಹಿತಿ:

  • 2019: ಮಂಡ್ಯ ಲೋಕಸಭಾ ಕ್ಷೇತ್ರ- 128,876 ಮತಗಳ ಅಂತರದ ಸೋಲು
  • 2023- ರಾಮನಗರ ವಿಧಾನಸಭಾ ಕ್ಷೇತ್ರ- 10,715 ಮತಗಳ ಅಂತರದ ಸೋಲು
  • 2024- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ- 25,413 ಮತಗಳ ಅಂತರದ ಸೋಲು

2028 ರಲ್ಲಿ ರಾಮನಗರದಿಂದ ಮತ್ತೆ ಸ್ಪರ್ಧಿಸಲಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ವಿಜಯಲಕ್ಷ್ಮಿ ಒಲಿಯಲಿದೆಯಾ ಕಾದು ನೋಡಬೇಕಿದೆ.

 

About the Author

Jiokannadanews

Administrator

jiokannadanews.com

Visit Website View All Posts
Tags: Nikhil Kumaraswamy

Post navigation

Previous: ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’
Next: ‘ಗೃಹಲಕ್ಷ್ಮಿ’ ಹಣ ಪಡೆಯಲು ಹೊಸ ರೂಲ್ಸ್​

Related Stories

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
Gruha Lakshmi Re-verification: What You Need to Know.
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಬರಬೇಕಿದ್ದರೆ ಈ ದಾಖಲೆಗಳು ನೀಡಲೇಬೇಕು!

Jiokannadanews Posted on 1 week ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 2 days ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 6 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 1 week ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 6 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.