Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ದೇಶ
  • ಹಿಂದೂ ಯುವಕನ ಕೊಲೆ: ಕ್ರೂರಿಗಳು ಅಂದರ್..!
  • ಕ್ರೈಮ್
  • ದೇಶ

ಹಿಂದೂ ಯುವಕನ ಕೊಲೆ: ಕ್ರೂರಿಗಳು ಅಂದರ್..!

Jiokannadanews Posted on 2 weeks ago 1 minute read
delhi tarun murder case

Tarun Kumar

ದೆಹಲಿಯ ಉತ್ತಮ್ ನಗರದ ಹಸ್ತಲ್ ಜೆಜೆ ಕಾಲೋನಿಯಲ್ಲಿ ನಡೆದ 26 ವರ್ಷದ ತರುಣ್ ಕುಮಾರ್ (Tarun Kumar Murder) ಕೊಲೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಂಕಿತರಲ್ಲಿ ಒಬ್ಬ ಅಪ್ರಾಪ್ತ ವಯಸ್ಕನೂ ಸೇರಿದ್ದಾನೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಸಿಎಂ ರೇಖಾ ಗುಪ್ತಾ ಸೂಚಿಸಿದ್ದಾರೆ.

ಘಟನೆಯ ಹಿನ್ನೆಲೆ

ಮಾರ್ಚ್ 4 ರಂದು ಹೋಳಿ ಹಬ್ಬದ ಸಂಭ್ರಮದಲ್ಲಿದ್ದಾಗ ತರುಣ್ ಕುಟುಂಬದ 11 ವರ್ಷದ ಬಾಲಕಿ ಎಸೆದ ನೀರಿನ ಬಲೂನ್ ಆಕಸ್ಮಿಕವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯೊಬ್ಬರಿಗೆ ತಗುಲಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಹಿಳೆ ಹಾಗೂ ಕುಟುಂಬಸ್ಥರು ಜಗಳಕ್ಕಿಳಿದಿದ್ದರು.

ಈ ಸಂಬಂಧ ತರುಣ್ ಕುಟುಂಬದವರು ಕ್ಷಮೆಯಾಚಿಸಿದರೂ, ನೆರೆಮನೆಯವರು ಗಲಾಟೆ ನಡೆಸಿದ್ದರು. ಈ ಎರಡೂ ಕುಟುಂಬಗಳು ಸುಮಾರು 50 ವರ್ಷಗಳಿಂದ ನೆರೆಹೊರೆಯವರಾಗಿದ್ದರೂ ಸಣ್ಣಪುಟ್ಟ ವಿಷಯಗಳಿಗೆ ಈ ಹಿಂದೆ ಮನಸ್ತಾಪ ಹೊಂದಿದ್ದರು ಎನ್ನಲಾಗಿದೆ. ಹೀಗಾಗಿ ಸಣ್ಣ ವಿಷಯವು ಅಲ್ಲಿಗೆ ಮುಗಿದಿರಲಿಲ್ಲ.

ದಾರುಣ ದಾಳಿ

ಅಂದು ರಾತ್ರಿ ಸುಮಾರು 10:30ಕ್ಕೆ 26 ವರ್ಷದ ತರುಣ್ ಕುಮಾರ್ (ಡಿಜಿಟಲ್ ಮಾರ್ಕೆಟಿಂಗ್ ವಿದ್ಯಾರ್ಥಿ) ತನ್ನ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ, 8 ರಿಂದ 20 ಜನರ ಗುಂಪು ಆತನನ್ನು ಅಡ್ಡಗಟ್ಟಿದ್ದಾರೆ.

ಇತ್ತ ಮನೆಯ ಹೊರಗಿನ ಜಗಳದ ಬಗ್ಗೆ ತಿಳಿಯದ ತರುಣ್ ಮೇಲೆ ಗುಂಪು ಕಬ್ಬಿಣದ ಸಳುಗಳು, ಇಟ್ಟಿಗೆ ಮತ್ತು ಕಲ್ಲುಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಈ ವೇಳೆ ಆತನ ಎದೆಯ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ತರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಚ್ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೊಲೀಸ್ ಕ್ರಮ ಮತ್ತು ತನಿಖೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಈವರೆಗೆ 8 ಜನರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಿಜಾಮುದ್ದೀನ್, ಅವರ ಮಗ ಉಮರ್ದಿನ್, ಜುಮ್ಮದೀನ್, ಕಮರುದ್ದೀನ್ ಹಾಗೂ ಉಮರುದ್ದೀನ್ ಅವರ ಮಗ ಮುಜಾಫರ್, ಮುಸ್ತಾಕ್ ಮತ್ತು ತಾಹಿರ್ ಎಂದು ಗುರುತಿಸಲಾಗಿದೆ.

ಬುಲ್ಡೋಝರ್ ಕ್ರಮ

ಮಾರ್ಚ್ 8 ರಂದು, ಈ ಪ್ರಕರಣದ ಆರೋಪಿಗಳ ಮನೆಗಳಲ್ಲಿದ್ದ ಅನಧಿಕೃತ ಕಟ್ಟಡಗಳನ್ನು ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಸಾರ್ವಜನಿಕ ಆಕ್ರೋಶ

ತರುಣ್ ಸಾವಿನ ನಂತರ ಉತ್ತಮ್ ನಗರ ಮೆಟ್ರೋ ನಿಲ್ದಾಣದ ಬಳಿ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದವು. ಸ್ಥಳೀಯರು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತ ಉತ್ತಮ್ ನಗರದ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಪಿಡ್ ಆಕ್ಷನ್ ಫೋರ್ಸ್ (RAF) ಸೇರಿದಂತೆ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

 

 

About the Author

Jiokannadanews

Administrator

jiokannadanews.com

Visit Website View All Posts
Tags: National News

Post navigation

Previous: ಕರ್ನಾಟಕದ್ದು ‘ಹಲಾಲ್’ ಬಜೆಟಾ? ಇಲ್ಲಿದೆ ನಿಜಾಂಶ
Next: IPL 2026: ಐಪಿಎಲ್ ವೇಳಾಪಟ್ಟಿ ಪ್ರಕಟ

Related Stories

PM Modi's Motherland and Fatherland's Fact Check
  • ದೇಶ

ಈ ಸುದ್ದಿ ‘ಮದರ್​ಲ್ಯಾಂಡ್-ಫಾದರ್​ಲ್ಯಾಂಡ್’ ವಿಡಿಯೋ ನಂಬಿದವರಿಗೆ..!

Jiokannadanews Posted on 1 week ago
benjamin netanyahu dead or alive: New Video Viral
  • ದೇಶ

ಇಸ್ರೇಲ್ ಪ್ರಧಾನಿ ಬದುಕಿಲ್ವಾ? ಅನುಮಾನ ಹುಟ್ಟುಹಾಕಿದ ಹೊಸ ವಿಡಿಯೋ

Jiokannadanews Posted on 1 week ago
Iran vs Isreal War: IRGC Threatens to Benjamin Netanyahu
  • ದೇಶ

ಬೆಂಜಮಿನ್ ನೆತನ್ಯಾಹುನ ಬೆನ್ನಟ್ಟಿ ಕೊಲ್ಲುತ್ತೇವೆ: ಇರಾನ್ ಶಪಥ

Jiokannadanews Posted on 1 week ago

Trending News

16.7 ಸಾವಿರ ಕೋಟಿಗೆ RCB ಮಾರಾಟ..! IMG-20260324-WA0024 1
  • ಕ್ರಿಕೆಟ್

16.7 ಸಾವಿರ ಕೋಟಿಗೆ RCB ಮಾರಾಟ..!

Posted on 13 hours ago
IPL 2026: RCB ತಂಡದ ಪ್ರಮುಖ ಆಟಗಾರ ಔಟ್..! IPL 2026: RCB's Yash Dayal won't be playing this season 2
  • ಕ್ರಿಕೆಟ್

IPL 2026: RCB ತಂಡದ ಪ್ರಮುಖ ಆಟಗಾರ ಔಟ್..!

Posted on 17 hours ago
IPL 2026: 15,300 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ಮಾರಾಟ ipl 2026: rajasthan royals new owner 3
  • ಕ್ರಿಕೆಟ್

IPL 2026: 15,300 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ಮಾರಾಟ

Posted on 17 hours ago
IPL 2026: 11 ಸೀಟ್ ಖಾಲಿ, ಎಲ್ಲರಿಗೂ 11 ನಂಬರ್​ನ ಜೆರ್ಸಿ..! IPL 2026: RCB keep 11 empty seats to honour stampede victims 4
  • ಕ್ರಿಕೆಟ್

IPL 2026: 11 ಸೀಟ್ ಖಾಲಿ, ಎಲ್ಲರಿಗೂ 11 ನಂಬರ್​ನ ಜೆರ್ಸಿ..!

Posted on 17 hours ago
ಐಫೋನ್-18 ಬಿಡುಗಡೆ ಯಾವಾಗ? ಇದರ ವಿಶೇಷತೆಗಳೇನು? iphone 18 release date 5
  • ಟೆಕ್

ಐಫೋನ್-18 ಬಿಡುಗಡೆ ಯಾವಾಗ? ಇದರ ವಿಶೇಷತೆಗಳೇನು?

Posted on 2 days ago

You may have missed

IMG-20260324-WA0024
  • ಕ್ರಿಕೆಟ್

16.7 ಸಾವಿರ ಕೋಟಿಗೆ RCB ಮಾರಾಟ..!

Jiokannadanews Posted on 13 hours ago
IPL 2026: RCB's Yash Dayal won't be playing this season
  • ಕ್ರಿಕೆಟ್

IPL 2026: RCB ತಂಡದ ಪ್ರಮುಖ ಆಟಗಾರ ಔಟ್..!

Jiokannadanews Posted on 17 hours ago
ipl 2026: rajasthan royals new owner
  • ಕ್ರಿಕೆಟ್

IPL 2026: 15,300 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ಮಾರಾಟ

Jiokannadanews Posted on 17 hours ago
IPL 2026: RCB keep 11 empty seats to honour stampede victims
  • ಕ್ರಿಕೆಟ್

IPL 2026: 11 ಸೀಟ್ ಖಾಲಿ, ಎಲ್ಲರಿಗೂ 11 ನಂಬರ್​ನ ಜೆರ್ಸಿ..!

Jiokannadanews Posted on 17 hours ago

Categories

  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.