DK Shivakumar
ಕರ್ನಾಟಕ ರಾಜಕೀಯದಲ್ಲಿ ಇಂದು ಅತ್ಯಂತ ಮಹತ್ವದ ದಿನವಾಗಿದ್ದು, ದೀರ್ಘಾವಧಿಯ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಕೊನೆಗೂ ಅಧಿಕೃತ ರೂಪ ಪಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು (ಜೂನ್ 3, 2026) ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಸುಗಮವಾಗಿ ಮುಕ್ತಾಯಗೊಂಡಿದ್ದು, ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಇದೇ 13 ಮಂದಿ ಶಾಸಕರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಂತೆ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರುಗಳ ಪಟ್ಟಿ ಈ ಕೆಳಗಿನಂತಿದೆ…
- ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ)
- ಡಾ. ಜಿ. ಪರಮೇಶ್ವರ
- ಕೆ.ಎಚ್. ಮುನಿಯಪ್ಪ
- ಕೆ.ಜೆ. ಜಾರ್ಜ್
- ಎಂ.ಬಿ. ಪಾಟೀಲ್
- ರಾಮಲಿಂಗಾರೆಡ್ಡಿ
- ಸತೀಶ್ ಜಾರಕಿಹೊಳಿ
- ಕೃಷ್ಣ ಬೈರೇಗೌಡ
- ಪ್ರಿಯಾಂಕ್ ಖರ್ಗೆ
- ಯು.ಟಿ. ಖಾದರ್
- ಈಶ್ವರ ಖಂಡ್ರೆ
- ಯತೀಂದ್ರ ಸಿದ್ದರಾಮಯ್ಯ
- ಬೈರತಿ ಸುರೇಶ್
- ಶರಣ ಪ್ರಕಾಶ್ ಪಾಟೀಲ್