Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಕ್ರಿಕೆಟ್
  • IND vs NZ: ಫೈನಲ್ ಪಂದ್ಯ ರದ್ದಾದ್ರೆ ಯಾರು ಚಾಂಪಿಯನ್?
  • ಕ್ರಿಕೆಟ್

IND vs NZ: ಫೈನಲ್ ಪಂದ್ಯ ರದ್ದಾದ್ರೆ ಯಾರು ಚಾಂಪಿಯನ್?

Jiokannadanews Posted on 5 months ago 1 minute read
if india vs new zealand final match cancelled due to rain who will win

IND vs NZ

ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್ 8 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಮೂರನೇ ಬಾರಿ ಟಿ20 ವಿಶ್ವಕಪ್ ಗೆದ್ದ ವಿಶ್ವದ ಮೊದಲ ತಂಡ ಎನಿಸಿಕೊಳ್ಳಲಿದೆ. ಅತ್ತ ನ್ಯೂಝಿಲೆಂಡ್ ತಂಡ ಗೆದ್ದರೆ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಇತಿಹಾಸ ನಿರ್ಮಿಸಲಿದೆ. ಹೀಗಾಗಿ ನಾಳಿನ (ಮಾ.8) ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಒಂದು ವೇಳೆ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ, ಅಥವಾ ಕಾರಣಾಂತರಗಳಿಂದ ಮ್ಯಾಚ್​ ರದ್ದಾದರೆ ಯಾರು ಚಾಂಪಿಯನ್ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

  • ಮೀಸಲು ದಿನ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಫೈನಲ್ ಪಂದ್ಯಕ್ಕೆ ಮಾರ್ಚ್ 9 ರಂದು ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಅಂದರೆ ನಿಗದಿತ ದಿನದಂದು (ಮಾರ್ಚ್ 8) ಪಂದ್ಯ ಪೂರ್ಣಗೊಳ್ಳದಿದ್ದರೆ, ಮರುದಿನ ಪಂದ್ಯ ಮುಂದುವರಿಯುತ್ತದೆ.
  • ಹೆಚ್ಚುವರಿ 90 ನಿಮಿಷಗಳು: ಇನ್ನು ಈ ಪಂದ್ಯವು ಕಾರಣಾಂತರದಿಂದ ವಿಳಂಬವಾದರೆ ಅಥವಾ ಮಳೆ ಅಡಚಣೆ ಉಂಟು ಮಾಡಿದರೆ ಹೆಚ್ಚುವರಿ 90 ನಿಮಿಷಗಳನ್ನು ಬಳಸಲಾಗುತ್ತದೆ. ಅಂದರೆ 11 ಗಂಟೆಗೆ ಮುಗಿಯುವ ಪಂದ್ಯವನ್ನು 12.30 ಗಂಟೆಯವರೆಗೆ ಮುಂದುವರೆಸಲಾಗುತ್ತದೆ.
  • ಕನಿಷ್ಠ ಓವರ್‌ಗಳ ನಿಯಮ: ಒಂದು ವೇಳೆ ಪಂದ್ಯವು ಅರ್ಧದಲ್ಲಿ ಸ್ಥಗಿತಗೊಂಡರೆ ಫಲಿತಾಂಶ ಘೋಷಿಸಲು ಎರಡೂ ತಂಡಗಳು ತಲಾ ಕನಿಷ್ಠ 10 ಓವರ್‌ಗಳನ್ನು ಆಡಿರುವುದು ಕಡ್ಡಾಯ. ಅಂದರೆ ಎರಡೂ ತಂಡಗಳು ಕನಿಷ್ಠ 10 ಓವರ್​ಗಳ ಬ್ಯಾಟಿಂಗ್ ಮಾಡಿದ್ದರೆ ಮಾತ್ರ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.
  • ಸೂಪರ್ ಓವರ್: ಒಂದು ವೇಳೆ ಪಂದ್ಯವು ಟೈ ಆದರೆ, ವಿಜೇತರನ್ನು ನಿರ್ಧರಿಸಲು ಸೂಪರ್ ಓವರ್ ನಡೆಸಲಾಗುತ್ತದೆ. ಮೊದಲ ಸೂಪರ್ ಓವರ್ ಕೂಡ ಟೈ ಆದರೆ, ಫಲಿತಾಂಶ ಬರುವವರೆಗೆ ಸತತವಾಗಿ ಸೂಪರ್ ಓವರ್‌ಗಳನ್ನು ನಡೆಸುವ ನಿಯಮವಿದೆ.

ಮೀಸಲು ದಿನದಲ್ಲಿ ಪಂದ್ಯ ನಡೆಯುವುದು ಹೇಗೆ?

ಮಾರ್ಚ್ 8 ರಂದು ಮಳೆ ಬಂದು ಪಂದ್ಯ ಸ್ಥಗಿತಗೊಂಡರೆ ಮರುದಿನ ಪಂದ್ಯವನ್ನು ಆಯೋಜಿಸಲಾಗುತ್ತದೆ. ಆದರೆ ಇಲ್ಲಿ ಮೊದಲ ದಿನ ಪಂದ್ಯ ಎಲ್ಲಿ ನಿಂತಿತ್ತೋ, ಅಲ್ಲಿಂದಲೇ ಮುಂದುವರೆಸಲಾಗುತ್ತದೆ. ಅಂದರೆ ಹೊಸದಾಗಿ ಪಂದ್ಯ ಶುರುವಾಗುವುದಿಲ್ಲ. ಬದಲಿಗೆ ನಿಗದಿತ ದಿನದಂದು ಕೊನೆಗೊಂಡಿದ್ದಲ್ಲಿಂದಲೇ ಮ್ಯಾಚ್ ಮುಂದುವರೆಯಲಿದೆ.

ಇದನ್ನೂ ಓದಿ: IPL 2026: ಐಪಿಎಲ್​ ಆರಂಭಕ್ಕೆ ಡೇಟ್ ಫಿಕ್ಸ್​

ಮೀಸಲು ದಿನ ಕೂಡ ರದ್ದಾದರೆ ಯಾರು ಚಾಂಪಿಯನ್?

ನಿಗದಿತ ದಿನದಂದು ಫೈನಲ್ ಪಂದ್ಯ ನಡೆಯದಿದ್ದರೆ ಮೀಸಲು ದಿನದಲ್ಲಿ ಮ್ಯಾಚ್ ಮುಂದುವರೆಸಲಾಗುತ್ತದೆ. ಇನ್ನು ಮೀಸಲು ದಿನದಂದು ಕೂಡ ಮಳೆ ಬಂದು ಕನಿಷ್ಠ ಓವರ್‌ಗಳ ಆಟ ಸಾಧ್ಯವಾಗದಿದ್ದರೆ, ಭಾರತ ಮತ್ತು ನ್ಯೂಝಿಲೆಂಡ್ ಎರಡೂ ತಂಡಗಳನ್ನು ‘ಜಂಟಿ ವಿಜೇತರು’ ಎಂದು ಘೋಷಿಸಿ ಟ್ರೋಫಿಯನ್ನು ಹಂಚಲಾಗುತ್ತದೆ.

 

About the Author

Jiokannadanews

Administrator

jiokannadanews.com

Visit Website View All Posts
Tags: T20 World Cup

Post navigation

Previous: ಈ ಸಮಸ್ಯೆಗಳಿಗೆ ಇದುವೇ ‘ಮನೆಮದ್ದು’
Next: ಕರ್ನಾಟಕದ್ದು ‘ಹಲಾಲ್’ ಬಜೆಟಾ? ಇಲ್ಲಿದೆ ನಿಜಾಂಶ

Related Stories

Sadagoppan Ramesh Slams Selectors for Dropping RCB Players
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Jiokannadanews Posted on 4 days ago
vaibhav-sooryavanshi-3
  • ಕ್ರಿಕೆಟ್

IPL 2026: ‘ಸೂರ್ಯವಂಶಿ’ ಎಂಬ ಸುನಾಮಿ

Jiokannadanews Posted on 3 months ago
SHOCKING: SRH Vice-Captain Abhishek Sharma Fined 25% Match Fee
  • ಕ್ರಿಕೆಟ್

IPL 2026: ಅಭಿಷೇಕ್ ಶರ್ಮಾಗೆ 25 ಲಕ್ಷ ರೂ. ದಂಡ..!

Jiokannadanews Posted on 4 months ago

Trending News

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ! Dharmendra Pradhan Resigns Over NEET-UG 2026 Paper Leak Row 1
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Posted on 2 days ago
ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP Picsart_26-07-24_17-52-02-956 2
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Posted on 3 days ago
ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ? Why Dharmendra Pradhan Won't Resign? 3
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Posted on 3 days ago
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು? Sonam Wangchuk Ends 26-Day Fast After Govt Assurances 4
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Posted on 3 days ago
ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..! Sadagoppan Ramesh Slams Selectors for Dropping RCB Players 5
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Posted on 4 days ago

You may have missed

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 2 days ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 3 days ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 3 days ago
Sonam Wangchuk Ends 26-Day Fast After Govt Assurances
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Jiokannadanews Posted on 3 days ago

Categories

  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.