gruhalakshmi
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬದಲಾವಣೆಯ ಕಾರಣ ಪ್ರತಿಯೊಬ್ಬ ಫಲಾನುಭವಿಗಳು ತಾವು ಬದುಕಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಅಂದರೆ ಕಡ್ಡಾಯ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಸರ್ಕಾರಕ್ಕೆ ಮನವಿ:
ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ. ಈ ಮನವಿಯಲ್ಲಿ ಗ್ಯಾರೆಂಟಿ ಯೋಜನೆಯ ನಿಯಮವನ್ನು ಬದಲಿಸುವಂತೆ ಕೇಳಿಕೊಳ್ಳಲಾಗಿದೆ.
ಹೊಸ ನಿಯಮ ಜಾರಿಯಾದರೆ, ಪ್ರತಿ ವರ್ಷ ಗೃಹಲಕ್ಷ್ಮಿ ಫಲಾನುಭವಿಗಳು ತಾವು ಬದುಕಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಇದಕ್ಕಾಗಿ ಫಲಾನುಭವಿಗಳು ಇನ್ನೂ ಬದುಕಿದ್ದೇವೆ ಎಂಬುದರ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಹೊಸ ನಿಯಮವೇಕೆ?
ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಸಲು ರಾಜ್ಯ ಸರ್ಕಾರವು ಹೊಸ ನಿಯಮ ರೂಪಿಸಲು ಮುಂದಾಗುತ್ತಿದೆ. ಅಂದರೆ ಇತ್ತೀಚಿನ ದಿನಗಳಲ್ಲಿ ಫಲಾನುಭವಿಗಳಲ್ಲಿ ಕೆಲವರು ಮರಣ ಹೊಂದಿದ್ದರೂ, ಆ ಮಹಿಳೆಯರ ಖಾತೆಗಳಿಗೆ ಹಣ ಜಮಾವಣೆಯಾಗುತ್ತಿದೆ.
ಇದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ನಿಯಮವನ್ನು ಜಾರಿಗೊಳಿಸಲು ಮುಂದಾಗುತ್ತಿದ್ದಾರೆ.
ಈ ನಿಯಮವು ಜಾರಿಯಾದರೆ ಗೃಹಲಕ್ಷ್ಮಿ ಹಣವು ಜೀವಿತಾವಧಿಯಲ್ಲಿ ಮಾತ್ರ ಸಿಗಲಿದೆ. ಈ ಮೂಲಕ ಮರಣ ಹೊಂದಿರುವವರ ಮಾಹಿತಿಯನ್ನು ಮರೆಮಾಚಿ ಹಣ ಪಡೆಯುತ್ತಿರುವುದಕ್ಕೆ ಕಡಿವಾಣ ಹಾಕಲಿದ್ದಾರೆ.
ಬದುಕಿರುವುದನ್ನು ನಿರೂಪಿಸುವುದು ಹೇಗೆ?
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಬದುಕಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಮುಂಬರುವ ದಿನಗಳಲ್ಲಿ ಬ್ಯಾಂಕ್ಗೆ ತೆರಳಬೇಕಾಗಿ ಬರಬಹುದು. ಸಾಮಾನ್ಯವಾಗಿ ಪಿಂಚಣಿ ಪಡೆಯುವ ಸರ್ಕಾರಿ ನೌಕರರು ಪ್ರತಿ ವರ್ಷದ ಅಂತ್ಯದಲ್ಲಿ ಬ್ಯಾಂಕ್ಗಳಿಗೆ ತೆರಳಿ ತಾವು ಬದುಕಿದ್ದೇವೆ ಎಂದು ಜೀವಿತ ಪ್ರಮಾಣ ಪತ್ರ ಸಲ್ಲಿಸುತ್ತಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’
ಇದೇ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಗೂ ನಿಯಮವನ್ನು ರೂಪಿಸಲಿದ್ದಾರೆ. ಅಂದರೆ ಇಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಮಾಡಲಾಗುತ್ತಿರುವುದರಿಂದ ಬ್ಯಾಂಕ್ಗಳಿಗೆ ತೆರಳಿ ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿ ಬರುಬಹುದು. ಈ ಮೂಲಕ ಅರ್ನಹರಿಗೆ ಹಣ ವರ್ಗಾವಣೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ಲ್ಯಾನ್ ರೂಪಿಸುತ್ತಿದೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳು ಎಷ್ಟು?
- ಕರ್ನಾಟಕದ ಸುಮಾರು 1.24 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ 2 ಸಾವಿರ ರೂ. ಪಡೆಯುತ್ತಿದ್ದಾರೆ.
- ರಾಜ್ಯ ಸರ್ಕಾರ ಈವರೆಗೆ 57,300 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಈ ಯೋಜನೆ ಅಡಿಯಲ್ಲಿ ಪಾವತಿಸಿದ್ದಾರೆ.