Skip to content

Jio Kannada News

Kannada News

banner-promo-full-green
Primary Menu
  • HOME
  • ಕ್ರಿಕೆಟ್
  • ರಾಜ್ಯ
  • ದೇಶ
  • ಆರೋಗ್ಯ
  • ಸಿನಿಮಾ
  • ಉದ್ಯೋಗ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ‘ಗೃಹಲಕ್ಷ್ಮಿ’ ಹಣ ಪಡೆಯಲು ಹೊಸ ರೂಲ್ಸ್​
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಪಡೆಯಲು ಹೊಸ ರೂಲ್ಸ್​

Jiokannadanews Posted on 5 months ago
new rules for gruhalakshmi scheme (2)

gruhalakshmi

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬದಲಾವಣೆಯ ಕಾರಣ ಪ್ರತಿಯೊಬ್ಬ ಫಲಾನುಭವಿಗಳು ತಾವು ಬದುಕಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಅಂದರೆ ಕಡ್ಡಾಯ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಸರ್ಕಾರಕ್ಕೆ ಮನವಿ:

ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ. ಈ ಮನವಿಯಲ್ಲಿ ಗ್ಯಾರೆಂಟಿ ಯೋಜನೆಯ ನಿಯಮವನ್ನು ಬದಲಿಸುವಂತೆ ಕೇಳಿಕೊಳ್ಳಲಾಗಿದೆ.

ಹೊಸ ನಿಯಮ ಜಾರಿಯಾದರೆ, ಪ್ರತಿ ವರ್ಷ ಗೃಹಲಕ್ಷ್ಮಿ ಫಲಾನುಭವಿಗಳು ತಾವು ಬದುಕಿರುವುದನ್ನು ಸಾಬೀತುಪಡಿಸಬೇಕಾಗುತ್ತದೆ. ಇದಕ್ಕಾಗಿ ಫಲಾನುಭವಿಗಳು ಇನ್ನೂ ಬದುಕಿದ್ದೇವೆ ಎಂಬುದರ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಹೊಸ ನಿಯಮವೇಕೆ?

ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಸಲು ರಾಜ್ಯ ಸರ್ಕಾರವು ಹೊಸ ನಿಯಮ ರೂಪಿಸಲು ಮುಂದಾಗುತ್ತಿದೆ. ಅಂದರೆ ಇತ್ತೀಚಿನ ದಿನಗಳಲ್ಲಿ ಫಲಾನುಭವಿಗಳಲ್ಲಿ ಕೆಲವರು ಮರಣ ಹೊಂದಿದ್ದರೂ, ಆ ಮಹಿಳೆಯರ ಖಾತೆಗಳಿಗೆ ಹಣ ಜಮಾವಣೆಯಾಗುತ್ತಿದೆ.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ನಿಯಮವನ್ನು ಜಾರಿಗೊಳಿಸಲು ಮುಂದಾಗುತ್ತಿದ್ದಾರೆ.

ಈ ನಿಯಮವು ಜಾರಿಯಾದರೆ ಗೃಹಲಕ್ಷ್ಮಿ ಹಣವು ಜೀವಿತಾವಧಿಯಲ್ಲಿ ಮಾತ್ರ ಸಿಗಲಿದೆ. ಈ ಮೂಲಕ ಮರಣ ಹೊಂದಿರುವವರ ಮಾಹಿತಿಯನ್ನು ಮರೆಮಾಚಿ ಹಣ ಪಡೆಯುತ್ತಿರುವುದಕ್ಕೆ ಕಡಿವಾಣ ಹಾಕಲಿದ್ದಾರೆ.

ಬದುಕಿರುವುದನ್ನು ನಿರೂಪಿಸುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಬದುಕಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಮುಂಬರುವ ದಿನಗಳಲ್ಲಿ ಬ್ಯಾಂಕ್​ಗೆ ತೆರಳಬೇಕಾಗಿ ಬರಬಹುದು. ಸಾಮಾನ್ಯವಾಗಿ ಪಿಂಚಣಿ ಪಡೆಯುವ ಸರ್ಕಾರಿ ನೌಕರರು ಪ್ರತಿ ವರ್ಷದ ಅಂತ್ಯದಲ್ಲಿ ಬ್ಯಾಂಕ್​ಗಳಿಗೆ ತೆರಳಿ ತಾವು ಬದುಕಿದ್ದೇವೆ ಎಂದು ಜೀವಿತ ಪ್ರಮಾಣ ಪತ್ರ ಸಲ್ಲಿಸುತ್ತಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಪೊಲೀಸರಿಗಿಂತ ಕಳ್ಳರದ್ದೇ ‘ಮೇಲುಗೈ’

ಇದೇ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಗೂ ನಿಯಮವನ್ನು ರೂಪಿಸಲಿದ್ದಾರೆ. ಅಂದರೆ ಇಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಮಾಡಲಾಗುತ್ತಿರುವುದರಿಂದ ಬ್ಯಾಂಕ್​​ಗಳಿಗೆ ತೆರಳಿ ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿ ಬರುಬಹುದು. ಈ ಮೂಲಕ ಅರ್ನಹರಿಗೆ ಹಣ ವರ್ಗಾವಣೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ಲ್ಯಾನ್ ರೂಪಿಸುತ್ತಿದೆ.

ರಾಜ್ಯದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳು ಎಷ್ಟು?

  • ಕರ್ನಾಟಕದ ಸುಮಾರು 1.24 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ 2 ಸಾವಿರ ರೂ. ಪಡೆಯುತ್ತಿದ್ದಾರೆ.
  • ರಾಜ್ಯ ಸರ್ಕಾರ ಈವರೆಗೆ 57,300 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಈ ಯೋಜನೆ ಅಡಿಯಲ್ಲಿ ಪಾವತಿಸಿದ್ದಾರೆ.

About the Author

Jiokannadanews

Administrator

jiokannadanews.com

Visit Website View All Posts
Tags: Karnataka News

Post navigation

Previous: 2028ರ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಕ್ಷೇತ್ರ ಫಿಕ್ಸ್​..!
Next: ವಿದೇಶದಿಂದ ಚಿನ್ನ, ಐಫೋನ್ ತರುತ್ತೀರಾ? ಹೊಸ ನಿಯಮ ಜಾರಿ

Related Stories

Push for Lottery Revival in Karnataka
  • ರಾಜ್ಯ

ಕರ್ನಾಟಕದಲ್ಲಿ ಮತ್ತೆ ಲಾಟರಿ ಪುನರಾರಂಭ?

Jiokannadanews Posted on 2 days ago
4 Covid Deaths in AP: Karnataka Tightens Border Vigil
  • ಆರೋಗ್ಯ
  • ರಾಜ್ಯ

ಕೊರೊನಾಗೆ ನಾಲ್ವರು ಬಲಿ:  ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ

Jiokannadanews Posted on 1 week ago
What is SIR 2026? Check the List of Documents Required Here
  • ರಾಜ್ಯ

SIR ಎಂದರೇನು? ನಿಮ್ಮ ಬಳಿ ಯಾವ ದಾಖಲೆಗಳು ಇರಬೇಕು?

Jiokannadanews Posted on 1 month ago

Trending News

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ! Dharmendra Pradhan Resigns Over NEET-UG 2026 Paper Leak Row 1
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Posted on 8 hours ago
ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP Picsart_26-07-24_17-52-02-956 2
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Posted on 1 day ago
ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ? Why Dharmendra Pradhan Won't Resign? 3
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Posted on 1 day ago
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು? Sonam Wangchuk Ends 26-Day Fast After Govt Assurances 4
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Posted on 1 day ago
ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..! Sadagoppan Ramesh Slams Selectors for Dropping RCB Players 5
  • ಕ್ರಿಕೆಟ್

ಬೇರೆಯವರಿಗೆ ನ್ಯಾಯ, RCB ಆಟಗಾರರಿಗೆ ಅನ್ಯಾಯ..!

Posted on 2 days ago

You may have missed

Dharmendra Pradhan Resigns Over NEET-UG 2026 Paper Leak Row
  • ದೇಶ

ಕಾಕ್ರೋಚ್​ಗಳಿಗೆ ಗೆಲುವು: ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

Jiokannadanews Posted on 8 hours ago
Picsart_26-07-24_17-52-02-956
  • ದೇಶ

ಕೇಂದ್ರ ಸರ್ಕಾರದ ಮುಂದೆ 3 ಬೇಡಿಕೆಯಿಟ್ಟ CJP

Jiokannadanews Posted on 1 day ago
Why Dharmendra Pradhan Won't Resign?
  • ದೇಶ

ಧರ್ಮೇಂದ್ರ ಪ್ರಧಾನ್ ಯಾಕೆ ರಾಜೀನಾಮೆ ನೀಡುತ್ತಿಲ್ಲ ಗೊತ್ತಾ?

Jiokannadanews Posted on 1 day ago
Sonam Wangchuk Ends 26-Day Fast After Govt Assurances
  • ದೇಶ

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ: ಮುಂದಿನ ಹಾದಿಯೇನು?

Jiokannadanews Posted on 1 day ago

Categories

  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.