Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ಕ್ರಿಕೆಟ್
  • ಟೀಮ್ ಇಂಡಿಯಾಗೆ ಸೆಹ್ವಾಗ್, ದ್ರಾವಿಡ್ ಪುತ್ರರ ಎಂಟ್ರಿ
  • ಕ್ರಿಕೆಟ್

ಟೀಮ್ ಇಂಡಿಯಾಗೆ ಸೆಹ್ವಾಗ್, ದ್ರಾವಿಡ್ ಪುತ್ರರ ಎಂಟ್ರಿ

Jiokannadanews Posted on 2 weeks ago 1 minute read
Aryavir Sehwag - Anvay Dravid

Aryavir Sehwag - Anvay Dravid

ಭಾರತೀಯ ಕ್ರಿಕೆಟ್‌ನ ಇಬ್ಬರು ದಿಗ್ಗಜರಾದ ವೀರೇಂದ್ರ ಸೆಹ್ವಾಗ್ ಮತ್ತು ರಾಹುಲ್ ದ್ರಾವಿಡ್ ಅವರ ಪುತ್ರರು ಜಂಟಿಯಾಗಿ ಭಾರತ ತಂಡವನ್ನು ಪ್ರತಿನಿಧಿಸುವ ಕಾಲ ಸನ್ನಿಹಿತವಾಗಿದೆ. ಆಸ್ಟ್ರೇಲಿಯಾ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ ತವರು ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19  ಏಕದಿನ ತಂಡದಲ್ಲಿ ಆರ್ಯವೀರ್ ಸೆಹ್ವಾಗ್ ಮತ್ತು ಅನ್ವಯ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಗಸ್ಟ್ 27 ರಂದು ಈ ಸರಣಿಗಾಗಿ 15 ಸದಸ್ಯರ ಏಕದಿನ ತಂಡವನ್ನು ಪ್ರಕಟಿಸಿದೆ. ಲಕ್ಷ್ಯ ರೈ ಚಂದಾನಿ ತಂಡವನ್ನು ಮುನ್ನಡೆಸಲಿದ್ದು, ಯಶ್‌ಬರ್ಧನ್ ಚೌಹಾಣ್ ಉಪನಾಯಕರಾಗಲಿದ್ದಾರೆ.

ಆರ್ಯವೀರ್ ಸೆಹ್ವಾಗ್‌ಗೆ ಚೊಚ್ಚಲ ಅವಕಾಶ:

ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ, 18 ವರ್ಷದ ಆರ್ಯವೀರ್ ಸೆಹ್ವಾಗ್ ಇದೇ ಮೊದಲ ಬಾರಿಗೆ ಭಾರತ U-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಬಲಗೈ ಬ್ಯಾಟರ್ ಆಗಿರುವ ಆರ್ಯವೀರ್ ಸದ್ಯ ಡೆಲ್ಲಿ ಪ್ರೀಮಿಯರ್ ಲೀಗ್‌ನಲ್ಲಿ ವೆಸ್ಟ್ ಡೆಲ್ಲಿ ಲಯನ್ಸ್ ತಂಡದ ಪರ ಆಡುತ್ತಿದ್ದಾರೆ. ಈ ಹಿಂದೆ ಕೂಚ್ ಬೆಹಾರ್ ಟ್ರೋಫಿಯಲ್ಲಿ 297 ರನ್ ಬಾರಿಸಿ ಅವರು ಬಿಸಿಸಿಐ ಸೆಲೆಕ್ಟರ್‌ಗಳ ಗಮನ ಸೆಳೆದಿದ್ದರು. ತಂದೆಯಂತೆಯೇ ಸ್ಫೋಟಕ ಬ್ಯಾಟಿಂಗ್ ಶೈಲಿಗೆ ಇವರು ಹೆಸರಾಗಿದ್ದಾರೆ.

ವಿಕೆಟ್ ಕೀಪರ್ ಆಗಿ ಅನ್ವಯ್ ದ್ರಾವಿಡ್:

ಟೀಮ್ ಇಂಡಿಯಾದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ, 17 ವರ್ಷದ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್-ಬ್ಯಾಟರ್ ಆಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ಶ್ರೀಲಂಕಾ ಪ್ರವಾಸದಲ್ಲಿ ಕಿರಿಯರ ತಂಡಕ್ಕೆ ಆಯ್ಕೆಯಾಗಿದ್ದ ಅನ್ವಯ್, ಯೂತ್ ಒನ್‌ಡೇ ಪಂದ್ಯದಲ್ಲಿ ಕೇವಲ 67 ಎಸೆತಗಳಲ್ಲಿ 87 ರನ್ ಚಚ್ಚಿ ಅಬ್ಬರಿಸಿದ್ದರು.

ಸರಣಿಯ ವೇಳಾಪಟ್ಟಿ:

ಸೆಪ್ಟೆಂಬರ್ 18 ರಿಂದ ಭಾರತ ಮತ್ತು ಆಸ್ಟ್ರೇಲಿಯಾ U-19 ತಂಡಗಳ ನಡುವೆ ಸರಣಿ ಆರಂಭವಾಗಲಿದೆ. ಈ ಪ್ರವಾಸದಲ್ಲಿ 3 ಏಕದಿನ ಪಂದ್ಯಗಳು ಮತ್ತು 2 ನಾಲ್ಕು ದಿನಗಳ (ಮಲ್ಟಿ-ಡೇ) ಪಂದ್ಯಗಳು ನಡೆಯಲಿವೆ. ಸೆಹ್ವಾಗ್ ಮತ್ತು ದ್ರಾವಿಡ್ ಪುತ್ರರು ಕೇವಲ ಏಕದಿನ ಸರಣಿಗೆ ಮಾತ್ರ ಆಯ್ಕೆಯಾಗಿದ್ದಾರೆ.

  1. ಸೆಪ್ಟೆಂಬರ್ 18: ಮೊದಲ ಏಕದಿನ ಪಂದ್ಯ (ರಾಜ್‌ಕೋಟ್)
  2. ಸೆಪ್ಟೆಂಬರ್ 21: ಎರಡನೇ ಏಕದಿನ ಪಂದ್ಯ (ರಾಜ್‌ಕೋಟ್)
  3. ಸೆಪ್ಟೆಂಬರ್ 23: ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್)

ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ: ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು

ಭಾರತ U19 ತಂಡ: ಲಕ್ಷ್ಯ ರೈ ಚಂದಾನಿ (ನಾಯಕ), ಯಶಬರ್ಧನ್ ಚೌಹಾಣ್ (ಉಪನಾಯಕ), ರಜತ್ ಬಾಘೆಲ್ (ವಿಕೆಟ್ ಕೀಪರ್), ಆರ್ಯವೀರ್ ಸೆಹ್ವಾಗ್, ವಿ.ಕೆ. ವಿನೀತ್, ಕುಶಾಗ್ರ ಓಜಾ, ಅರ್ಜುನ್ ರಜಪೂತ್, ಮನಲ್ ಚೌಹಾಣ್, ಅನ್ವಯ್ ದ್ರಾವಿಡ್ (ವಿಕೆಟ್ ಕೀಪರ್), ವಿ. ಯಶ್ವೀರ್, ರೋಹಿತ್ ಯಾದವ್, ಶವಿನ್ ವಿನೋದ್, ಮೋಹಿತ್ ಉಲ್ವಾ, ಚಿಗುರುಪತಿ ವೆಂಕಟ, ಕಾವ್ಯಾ ಪಟೇಲ್.

 

About the Author

Jiokannadanews

Administrator

jiokannadanews.com

Visit Website View All Posts
Tags: Team India

Post navigation

Previous: RSS ಪಥಸಂಚಲನದಲ್ಲಿ ಭಾಗಿ: ಇಬ್ಬರು ಸರ್ಕಾರಿ ಶಿಕ್ಷಕರು ಅಮಾನತು
Next: ಮಿಲಾದ್ ರ‍್ಯಾಲಿಯಲ್ಲಿ ಜಗಳ ಶುರು ಮಾಡಿದ್ದು ಯಾರು? ಇಲ್ಲಿದೆ ವಿಡಿಯೋ

Related Stories

India’s squad for Afghanistan T20I series
  • ಕ್ರಿಕೆಟ್

ಭಾರತ ಟಿ20 ತಂಡ ಪ್ರಕಟ

Jiokannadanews Posted on 1 week ago
Did You Know About These 11 Types Of No Balls In Cricket?
  • ಕ್ರಿಕೆಟ್

ಕ್ರಿಕೆಟ್​​ನಲ್ಲಿರುವ 11 ನೋಬಾಲ್​ ಬಗ್ಗೆ ಗೊತ್ತಿದ್ಯಾ?

Jiokannadanews Posted on 2 weeks ago
Roberto Carlos Breaks Silence on Islam Conversion Rumors
  • ಕ್ರಿಕೆಟ್

ಇಸ್ಲಾಂ ಧರ್ಮಕ್ಕೆ ಮತಾಂತರ? ಕೊನೆಗೂ ಮೌನ ಮುರಿದ ಕಾರ್ಲೋಸ್!

Jiokannadanews Posted on 3 weeks ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 2 days ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 6 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 1 week ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 2 days ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 6 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 1 week ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.