Skip to content

Jio Kannada News

Kannada News

banner-promo-full-green
Primary Menu
  • HOME
  • ರಾಜ್ಯ
  • ದೇಶ
  • ಉದ್ಯೋಗ
  • ಕ್ರಿಕೆಟ್
  • ಆರೋಗ್ಯ
  • ಸಿನಿಮಾ
  • ಕ್ರೈಮ್
  • ಆಟೋಮೊಬೈಲ್
  • ಟೆಕ್
  • Contact Us
Light/Dark Button
Wtach Live
  • Home
  • ರಾಜ್ಯ
  • ಜೈಲಿಗೆ ಹಾಕಿದ್ರು ಸರಿ, ವಂದೇ ಮಾತರಂನ 2 ಪ್ಯಾರಾ ಅಷ್ಟೇ ಹಾಡ್ತೇವೆ!
  • ರಾಜ್ಯ

ಜೈಲಿಗೆ ಹಾಕಿದ್ರು ಸರಿ, ವಂದೇ ಮಾತರಂನ 2 ಪ್ಯಾರಾ ಅಷ್ಟೇ ಹಾಡ್ತೇವೆ!

Jiokannadanews Posted on 3 weeks ago 1 minute read
Vande Mataram Row: BK Hariprasad's '2 Stanzas Only' Defiance

BK Hariprasad

ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಮೊಳಗಿದ್ದ ‘ವಂದೇ ಮಾತರಂ’ ಗೀತೆ, ಈಗ ರಾಜಕೀಯ ವಲಯದಲ್ಲಿ ತೀವ್ರ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಇತ್ತೀಚೆಗೆ ಭುಗಿಲೆದ್ದಿರುವ ವಂದೇ ಮಾತರಂ ವಿವಾದಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ನೇರ ಸವಾಲು ಈಗ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮನ್ನು ಜೈಲಿಗೆ ಹಾಕಿದರೂ ಸರಿ, ಅಥವಾ ನೇಣುಗಂಬಕ್ಕೆ ಏರಿಸಿದರೂ ಸರಿ, ನಾವು ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು (ಪ್ಯಾರಾಗಳನ್ನು) ಮಾತ್ರ ಹಾಡುತ್ತೇವೆ” ಎಂದು ಅತ್ಯಂತ ಆಕ್ರೋಶದಿಂದ ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್ ನಿಲುವು ಮತ್ತು ಸಾಂಪ್ರದಾಯಿಕ ಹಿನ್ನೆಲೆ:

ಬಿ.ಕೆ. ಹರಿಪ್ರಸಾದ್ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳುತ್ತಾ, ಕಾಂಗ್ರೆಸ್ ಪಕ್ಷವು 1896ರಿಂದಲೂ ತನ್ನ ಅಧಿಕೃತ ಅಧಿವೇಶನ ಹಾಗೂ ಕಾರ್ಯಕ್ರಮಗಳಲ್ಲಿ ಬಂಕಿಮಚಂದ್ರ ಚಟರ್ಜಿ ಅವರ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದೆ ಎಂದಿದ್ದಾರೆ. ಇಡೀ ದೇಶಕ್ಕೆ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದು ಕಾಂಗ್ರೆಸ್. ಹೀಗಾಗಿ ತಮ್ಮ ಪಕ್ಷಕ್ಕೆ ದೇಶಭಕ್ತಿಯ ಇತಿಹಾಸವನ್ನು ಯಾರೂ ಕಲಿಸಬೇಕಾಗಿಲ್ಲ ಎಂದು ಅವರು ಗುಡುಗಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ:

ದೇಶಭಕ್ತಿಯ ವಿಚಾರದಲ್ಲಿ ತಮಗೆ ಬಿಜೆಪಿ ಅಥವಾ ಆರ್‌ಎಸ್‌ಎಸ್ (RSS) ಸಂಘಟನೆಯಿಂದ ಯಾವುದೇ ‘ಪ್ರಮಾಣಪತ್ರ’ ಪಡೆಯುವ ಅಗತ್ಯವಿಲ್ಲ ಎಂದು ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

“1925 ರಿಂದ ಇಂದಿನವರೆಗೂ ಆರ್‌ಎಸ್‌ಎಸ್ ತನ್ನ ಶಾಖೆಗಳಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿಲ್ಲ, ರಾಷ್ಟ್ರಧ್ವಜವನ್ನೂ ಹಾರಿಸಿಲ್ಲ. ಅಂತಹ ಸಂಘಟನೆಗಳು ಇಂದು ನಮಗೆ ದೇಶಭಕ್ತಿಯ ಪಾಠ ಮಾಡಲು ಬರುತ್ತಿವೆ” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಆರ್‌ಎಸ್‌ಎಸ್‌ನ ಕಾನೂನುಬದ್ಧ ನೋಂದಣಿ ಪ್ರಕ್ರಿಯೆಯನ್ನು ಪ್ರಶ್ನಿಸಿದ ಅವರು, ಸಂಘಟನೆಯನ್ನು ಅಂತರರಾಷ್ಟ್ರೀಯ ಮಟ್ಟದ ಇತರ ಕೆಲವು ಸಂಘಟನೆಗಳಿಗೆ ಹೋಲಿಸುವ ಮೂಲಕ ವಿವಾದದ ಕಿಚ್ಚಿಗೆ ಇನ್ನಷ್ಟು ತುಪ್ಪ ಸುರಿದಿದ್ದಾರೆ.

ಅಲ್ಲದೆ, ವಂದೇ ಮಾತರಂ ಅನ್ನು ಬಲವಂತವಾಗಿ ಕಡ್ಡಾಯಗೊಳಿಸುವ ಮೂಲಕ ನಮ್ಮ ಅಧಿಕೃತ ರಾಷ್ಟ್ರಗೀತೆಯಾದ ‘ಜನಗಣಮನ’ವನ್ನು ಎರಡನೇ ದರ್ಜೆಗೆ ತಳ್ಳಲು ಕೇಂದ್ರ ಸರ್ಕಾರ ಹಾಗೂ ಆಡಳಿತ ಪಕ್ಷ ವ್ಯವಸ್ಥಿತ ಸಂಚು ರೂಪಿಸುತ್ತಿದೆ ಎಂದು ಬಿ.ಕೆ. ಹರಿಪ್ರಸಾದ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಗರಿಗೆದರಿದ ರಾಜಕೀಯ ವಿವಾದ:

ಕೇಂದ್ರ ಸರ್ಕಾರವು ರಾಷ್ಟ್ರೀಯ ಗೀತೆಯ ಗೌರವಕ್ಕೆ ಸಂಬಂಧಿಸಿದಂತೆ ತರಲು ಉದ್ದೇಶಿಸಿರುವ ಕೆಲವು ಪ್ರಸ್ತಾಪಗಳು ಮತ್ತು ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗಾಯನದ ಸುತ್ತ ನಡೆದ ಬೆಳವಣಿಗೆಗಳು ಈ ವಿವಾದಕ್ಕೆ ಮುಖ್ಯ ಕಾರಣವಾಗಿವೆ.

ಕೇವಲ ಕರ್ನಾಟಕ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕ ಒಲವುಗಳ ಬಗ್ಗೆ ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ದೇಶದ ಸಾಂಸ್ಕೃತಿಕ ಪ್ರಜ್ಞೆಗೆ ಅಪಮಾನ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಅವರಂತಹ ನಾಯಕರು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲೇಖಿಸಿ ನೀಡುತ್ತಿರುವ ಹೇಳಿಕೆಗಳು ಈ ಚರ್ಚೆಯನ್ನು ಮತ್ತೊಂದು ದಿಕ್ಕಿಗೆ ಕೊಂಡೊಯ್ದಿವೆ.

ಇದನ್ನೂ ಓದಿ: ಅಮಿತ್ ಶಾ ‘ಗೂಂಡಾ’ ಅಷ್ಟೇ… ಬಿಜೆಪಿ ನಾಯಕನ ವಾಗ್ದಾಳಿ..!

ಒಟ್ಟಾರೆಯಾಗಿ, ಸ್ವಾತಂತ್ರ್ಯ ಹೋರಾಟದ ವೇಳೆ ಮೊಳಗಿದ್ದ ಗೀತೆಯೊಂದು, ಇಂದು ರಾಜಕೀಯ ಬಲಪ್ರದರ್ಶನದ ವೇದಿಕೆಯಾಗಿ ಮಾರ್ಪಟ್ಟಿರುವುದು ದುರದೃಷ್ಟಕರ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಇನ್ನು ಈ ಗೀತೆಯನ್ನೂ ಕೂಡ ರಾಜಕೀಯಗೊಳಿಸಿದ್ದು ಯಾರು ಎಂಬುದು ನಿಮ್ಮ ವಿಚೇಚನೆಗೆ ಬಿಟ್ಟದ್ದು!

 

About the Author

Jiokannadanews

Administrator

jiokannadanews.com

Visit Website View All Posts
Tags: Karnataka News

Post navigation

Previous: ಪ್ರಧಾನಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದವನು ನಾನು!
Next: ಬಸ್ ಪ್ರಯಾಣಿಕರಿಗೆ ಶೀಘ್ರದಲ್ಲೇ ‘ದರ ಏರಿಕೆ ಭಾಗ್ಯ’

Related Stories

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 1 day ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 7 days ago
Gruha Lakshmi Re-verification: What You Need to Know.
  • ರಾಜ್ಯ

‘ಗೃಹಲಕ್ಷ್ಮಿ’ ಹಣ ಬರಬೇಕಿದ್ದರೆ ಈ ದಾಖಲೆಗಳು ನೀಡಲೇಬೇಕು!

Jiokannadanews Posted on 1 week ago

Trending News

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ! Missing Bengaluru Girls Found After 8 Months 1
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Posted on 1 day ago
ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್! Air India Mid-Air Terror: 3 Hydraulics Fail 2
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Posted on 5 days ago
ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್ St. Joseph's Madikeri 3
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Posted on 7 days ago
ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ! India Slams Pakistan Over Demolition of 125-Year-Old Hindu Temple 4
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Posted on 1 week ago
ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ! Yasin Malik Seeks Death Penalty, Announces Divorce From Pak Wife 5
  • ದೇಶ

ಗಲ್ಲು ಶಿಕ್ಷೆ ನೀಡಿ, ಪತ್ನಿಗೆ ವಿಚ್ಛೇದನ ನೀಡುತ್ತೇನೆ!

Posted on 1 week ago

You may have missed

Missing Bengaluru Girls Found After 8 Months
  • ಕ್ರೈಮ್
  • ರಾಜ್ಯ

ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!

Jiokannadanews Posted on 1 day ago
Air India Mid-Air Terror: 3 Hydraulics Fail
  • ದೇಶ

ಆಕಾಶದಲ್ಲೇ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ಸ್ ಫೇಲ್!

Jiokannadanews Posted on 5 days ago
St. Joseph's Madikeri
  • ರಾಜ್ಯ

ಬಾಸ್ಕೆಟ್‌ಬಾಲ್ ಪಂದ್ಯಾವಳಿ: ಪ್ರಚಂಡ ಪ್ರದರ್ಶನ ನೀಡಿದ ಸೇಂಟ್ ಜೋಸೆಫ್ಸ್

Jiokannadanews Posted on 7 days ago
India Slams Pakistan Over Demolition of 125-Year-Old Hindu Temple
  • ದೇಶ

ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಹಿಂದೂ ದೇವಾಲಯ ಧ್ವಂಸ!

Jiokannadanews Posted on 1 week ago

Categories

  • Trending News
  • Uncategorized
  • ಆಟೋಮೊಬೈಲ್
  • ಆರೋಗ್ಯ
  • ಉದ್ಯೋಗ
  • ಕ್ರಿಕೆಟ್
  • ಕ್ರೈಮ್
  • ಟೆಕ್
  • ದೇಶ
  • ರಾಜ್ಯ
  • ಸಿನಿಮಾ
  • Contact Us
  • About Us
  • Disclaimer
  • Terms and Conditions
  • Privacy Policy
Copyright © All rights reserved. | MoreNews by AF themes.